ಅವರು ಅಶ್ವತ್ಥ ನಾರಾಯಣ ಅಲ್ಲ 'ಮಾನಸಿಕ ಅಸ್ವಸ್ಥ ನಾರಾಯಣ' : ಬಿ.ಕೆ.ಹರಿಪ್ರಸಾದ್ ವಾಗ್ಧಾಳಿ

ಬೆಂಗಳೂರು : ಸಚಿವ ಅಶ್ವಥ್ ನಾರಾಯಣ ಅವರು ಮಾನಸಿಕ ಅಸ್ವಸ್ಥ ನಾರಾಯಣ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ಧಾಳಿ ನಡೆಸಿದ್ದಾರೆ.
ಮಾನಸಿಕ ಅಸ್ವಸ್ಥ ನಾರಾಯಣರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು.
ಸಿದ್ದರಾಮಯ್ಯರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ
ಇನ್ನೂ, ಕ್ಷಮೆ ಕೋರುವ ಬದಲು ಸಿದ್ದರಾಮಯ್ಯರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಅಂತ ಸಚಿವ ಅಶ್ವತ್ಥನಾರಾಯಣ್ ಹೇಳಿರುವುದು ಈಗ ಇನ್ನೊಂದು ವಿವಾದಕ್ಕೆ ಕಾರಣವಾಗಿದೆ. ಇಂದು ವಿವಾದದ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ್ ಅವರು ಸಿದ್ದರಾಮಯ್ಯರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಅಂತ ತಿಳಿಸಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಮಾತಿನ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಒಬ್ಬರನ್ನು ಟೀಕಿಸುವುದು ಇರುತ್ತದೆ. ರಾಜಕೀಯದಲ್ಲಿ ವಾಗ್ಧಾಳಿ ಒಂದು ಅವಿಭಾಜ್ಯ ಅಂಗ. ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ.ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದಿದ್ದಾರೆ.