ಕೇರಳದಿಂದ ಮಂಗಳೂರಿನ ಪುತ್ತೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ದಕ್ಷಿಣ ಕನ್ನಡ: ಕೇರಳದ ಕಣ್ಣೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಹೆಲಿಕ್ಯಾಪ್ಟರ್ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಅವರನ್ನು ಸಾವಿರಾರು ಕಾರ್ಯಕರ್ತರು ಸ್ವಾಗತಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹನುಮಗಿರಿಯಲ್ಲಿರುವಂತ ಗಜಾನನ ಶಾಲೆ ಮೈದಾನದಲ್ಲಿರುವಂತ ಹೆಲಿಪ್ಯಾಡ್ ಗೆ ಕೇರಳದ ಕಣ್ಣೂರಿನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದ್ದಾರೆ.
ಪುತ್ತೂರಿನ ಹನುಮಗಿರಿ ಹೆಲಿಪ್ಯಾಡ್ ಗೆ ಆಗಮಿಸಿದಂತ ಅವರು, ಸಮೀಪದಲ್ಲಿನ ಹನುಮಗಿರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡೋ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಆಗಮಿಸಿದ್ದಾರೆ. ಅವರು ಇಂದು ಪುತ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.