ಕೋವಿಡ್ ಹೆಚ್ಚಳದ ಬೆನ್ನಲ್ಲೇ 'ಸುಪ್ರೀಂ' ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ಕೋವಿಡ್ ಹೆಚ್ಚಳದ ಬೆನ್ನಲ್ಲೇ 'ಸುಪ್ರೀಂ' ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಆರು ತಿಂಗಳ ಗರಿಷ್ಠ ಮಟ್ಟವಾಗಿದೆ.

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.

ಚಂದ್ರಚೂಡ್ ವಕೀಲರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.

ವಕೀಲರು ನ್ಯಾಯಾಲಯಕ್ಕೆ. ಹಾಜರಾಗುವ ಅವಶ್ಯಕತೆ ಇಲ್ಲ ಆನ್ಲೈನ್ ಮೂಲಕವೇ ಪ್ರಕರಣಗಳ ವಾದ ಮಾಡಬಹುದು ಎಂದು ಅವರು ತಿಳಿಸಿದ್ದು, ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯ ನಿರ್ವಹಿಸಿ ಎಂದು ಹೇಳಿದ್ದಾರೆ.