ಡಾ.ಜಿ ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ: ಡಿ.ಕೆ ಶಿವಕುಮಾರ್

ಬೆಂಗಳೂರು: ರಣದೀಪ್ ಸಿಂಗ್ ಸುರ್ಜೇವಾಲ, ಡಾ.ಪರಮೇಶ್ವರ್ ಭೇಟಿ ವಿಚಾರಕ್ಕೆ ಸಂವಬಂಧಿಸಿದಂತೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಡಾ.ಜಿ ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಚಾರವಾಗಿ ಇಬ್ಬರು ನಾಯಕರು ಭೇಟಿಯಾಗಿದ್ದಾರೆ.ಬೆಂಗಳೂರು ಟ್ರಾಫಿಕ್ ವಿಚಾರವಾಗಿ ಸುರ್ಜೇವಾಲ ಭೇಟಿಯಾಗಿದ್ದಾರೆ.ಈ ವೇಳೆ ಸಿಂಗಾಪುರಕ್ಕೆ ಒಂದು ತಂಡವನ್ನು ಕಳಿಸಲು ನಿರ್ಧಾರ ಮಾಡಿದ್ದೇವೆ.
ಪರಮೇಶ್ವರ್ ನೇತೃತ್ವದಲ್ಲಿ ಒಂದು ತಂಡ ಸಿಂಗಾಪುರಕ್ಕೆ ಹೋಗಲಿದೆ. ಅದರ ಬಗ್ಗೆ ಸುರ್ಜೇವಾಲ, ಡಾ.ಜಿ.ಪರಮೇಶ್ವರ್ ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಬಂದಿರುವ ಕಳಂಕ ತಪ್ಪಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಇದೀಗ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಇನ್ನು 50 ದಿನಗಳ ಬಳಿಕ ಈ ಬಿಜೆಪಿ ಸರ್ಕಾರ ಇರುವುದಿಲ್ಲ. ನಮ್ಮ ಸರ್ವೆ ಪ್ರಕಾರ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ರಾಜ್ಯದ ಜನರಿಗೆ ನಾವು ಉತ್ತಮ ಆಡಳಿತ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.