ನಾಳೆ ಬದಲು ಇಂದೇ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಕ್ತಾಯ

ನಾಳೆ ಬದಲು ಇಂದೇ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಕ್ತಾಯ

ಬೆಳಗಾವಿ: ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭಗೊಂಡಿದ್ದಂತ ಚಳಿಗಾಲದ ವಿಧಾನಮಂಡಲದ ಅಧಿವೇಶನವು, ಇಂದು ಒಂದು ದಿನ ಮೊದಲೇ ಮುಕ್ತಾಯಗೊಳ್ಳಲಿದೆ.

ಈ ಬಗ್ಗೆ ಮಾತನಾಡಿರುವಂತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶುಕ್ರವಾರದ ನಾಳೆ ಮುಕ್ತಾಯಗೊಳ್ಳಬೇಕಾಗಿದ್ದಂತ ಚಳಿಗಾಲದ ಅಧಿವೇಶನವನ್ನು, ಗುರುವಾರದ ಇಂದೇ ಮುಕ್ತಾಯಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ.

ಇನ್ನೂ ಅಧಿವೇಶನವು ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗುವ ಒಂದೇ ಒಂದು ದಿನದ ಮೊದಲು ಉತ್ತರ ಕರ್ನಾಟಕದ ಬಗೆಗಿನ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಬುಧವಾರ ಸಂಜೆ ಬಿಜೆಪಿ ಸದಸ್ಯ ಎ ಎಸ್ ಪಾಟೀಲ್ ನಡಹಳ್ಳಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ, ಚರ್ಚೆ ಆರಂಭಿಸಲಾಗಿದೆ. ಇದು ಕೊನೆಯ ದಿನವಾದ ಇಂದು ಕೂಡ ಮುಂದುವರೆಯಲಿದೆ