ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ: ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ: ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ನಗರದಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಶುರುವಾರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಅಲಸನಹಳ್ಳಿ ಮುಖ್ಯ ರಸ್ತೆಯ ಎಸ್‌ ಎಸ್‌ ಎಸ್‌ ಬಾರ್‌ ಬಳಿ ನಡೆದಿದೆ.

45 ವರ್ಷದ ಮುನಿಯಪ್ಪ ಕೊಲೆಯಾ ವ್ಕ್ತಿ. ಶ್ರೀಧರ್‌ ಎಂಬಾತನಿಂದ ಕೃತ್ಯ ನಡೆದಿದೆ. ಶ್ರೀಧರ್‌ ಮತ್ತು ಮುನಿಯಪ್ಪ ಪರಿಚಿತರಾಗಿದ್ದರು. ಆದರೆ ರಾತ್ರಿ ಕುಡಿದ ಮತ್ತಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಮುನಿಯಪ್ಪನನ್ನು ಶ್ರೀಧರ್‌ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಈ ಸಂಬಂಧ ವರ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.