ಬೆಂಗಳೂರು ಜನರ ಗಮನಕ್ಕೆ.! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ

ಬೆಂಗಳೂರು ಜನರ ಗಮನಕ್ಕೆ.! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ

ಬೆಂಗಳೂರು: ನಗರದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಟೋ ಚಾಲಕರು ಡಿ. 29ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಅಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಇದೇ ತಿಂಗಳು 29ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರವನ್ನು ಸ್ಥಗಿತಗೊಳಿಸಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್​ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ.