ಮಕ್ಕಳಿಗೆ 'ಸಮವಸ್ತ್ರ' ನೀಡದ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗ್ಬೇಕು : ಹೈಕೋರ್ಟ್ ತರಾಟೆ

ಮಕ್ಕಳಿಗೆ 'ಸಮವಸ್ತ್ರ' ನೀಡದ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗ್ಬೇಕು : ಹೈಕೋರ್ಟ್ ತರಾಟೆ

ಬೆಂಗಳೂರು : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಉತ್ಸವ ನಡೆಸುತ್ತೀರಿ..ನಿಮಗೆ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುದಿಲ್ವಾ? ನಾಚಿಕೆಯಾಗಬೇಕು ನಿಮಗೆ ಎಂದು ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.

ನ್ಯಾಯಮೂರ್ತಿ ಬಿ ವೀಎಪ್ಪ ಮತ್ತು ಕೆ ಎಸ್ ಹೇಮಲತಾ ಅವರಿದ್ದ ಪೀಠ ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರಿ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, 1 ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್ ನೀಡುವಂತೆ ಹೈಕೋರ್ಟ್ 2018ರಲ್ಲಿ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದಿಂದ ಈ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳದ ಮಾ.ಮಂಜುನಾಥ್ ಎಂಬವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆ ಸಹಿಸುವುದಿಲ್ಲ. ಸರ್ಕಾರ ಕಣ್ಣು ತೆರೆದು ಸಮವಸ್ತ್ರ ಒದಗಿಸಬೇಕು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಉತ್ಸವ ನಡೆಸುತ್ತೀರಿ..ನಿಮಗೆ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುದಿಲ್ವಾ? ನಾಚಿಕೆಯಾಗಬೇಕು ನಿಮಗೆ ಎಂದು ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಹಾಗೂ ಎರಡು ವಾರದಲ್ಲಿ ಆದೇಶ ಪಾಲಿಸುವಂತೆ ಖಡಕ್ ಸೂಚನೆ ನೀಡಿದೆ.