'ಮೈಸೂರು ಗುಂಬಜ್' ಹೇಳಿಕೆ ವಿಚಾರಕ್ಕೆ ನಾನು ಬದ್ದ : ಸಂಸದ ಪ್ರತಾಪ್ ಸಿಂಹ

'ಮೈಸೂರು ಗುಂಬಜ್' ಹೇಳಿಕೆ ವಿಚಾರಕ್ಕೆ ನಾನು ಬದ್ದ : ಸಂಸದ ಪ್ರತಾಪ್ ಸಿಂಹ

ಮೈಸೂರು : ಮೈಸೂರು ಗುಂಬಜ್ ಹೇಳಿಕೆ ವಿಚಾರದಲ್ಲಿ ನನ್ನ ಹೇಳಿಕೆಗೆ ನಾನು ಬದ್ಧ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಗುಂಬಜ್ ವಿಚಾರದಲ್ಲಿ ನನ್ನ ಹೇಳಿಕೆಗೆ ನಾನು ಬದ್ದನಿದ್ದೇನೆ, ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ, ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮೈಸೂರು ಒಡೆಯರ್ ಹೆಸರು ಇಡಬೇಕೆಂದು ಮನವಿ ಮಾಡಿದ್ದೆ, ಅದು ಆಯಿತು.

ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ , ರೈಲಿಗೆ ಮಹಾರಾಜರ ಹೆಸರು ಇಡಬೇಕೆ ಹೊರತು ಅವರ ಶತ್ರುಗಳದ್ದಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಹೇಳಿದ್ದಾರೆ.