'ಯೂ ಈಡಿಯಟ್.' ; ರಾಹುಲ್ ಗಾಂಧಿ ವಿರುದ್ಧ ರಾಜ್ ಠಾಕ್ರೆ ತೀವ್ರ ವಾಗ್ದಾಳಿ

ಮುಂಬೈ : ವೀರ್ ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಭಾನುವಾರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ, ರಾಹುಲ್ ಗಾಂಧಿ 'ಮೂರ್ಖ' ಎಂದು ಕರೆದಿದ್ದಾರೆ.
ಅಂದ್ಹಾಗೆ, ಸಾವರ್ಕರ್ ಅವರು ಬ್ರಿಟಿಷ್ ರಾಜ್'ಗೆ ಬರೆದಿದ್ದಾರೆ ಎಂದು ಹೇಳಲಾದ ಪತ್ರದ ಆಯ್ದ ಭಾಗವನ್ನ ಉಲ್ಲೇಖಿಸಿದ ರಾಹುಲ್, 'ಕೇಸರಿ ಸಿದ್ಧಾಂತಿಯು ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹವರಿಗೆ ದ್ರೋಹ ಬಗೆದು ಬ್ರಿಟಿಷ್ ಆಡಳಿತದಿಂದ ತಮ್ಮನ್ನು ಕ್ಷಮಿಸುವಂತೆ ಬೇಡಿಕೊಂಡಿದ್ದಾರೆ' ಎಂದು ಹೇಳಿದ್ದರು. 'ವೀರ್ ಸಾವರ್ಕರ್ ಬ್ರಿಟಿಷರಿಗೆ ಪತ್ರ ಬರೆದರು. ನಂತ್ರ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು. ಸಾವರ್ಕರ್ ಭಯದಿಂದ ಈ ಪತ್ರಕ್ಕೆ ಸಹಿ ಹಾಕುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಬಗೆದರು' ಎಂದು ರಾಹುಲ್ ಹೇಳಿದ್ದರು.