ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಇಂದು ಪಿಎಂ ಕಿಸಾನ್ ಯೋಜನೆಯ 2 ನೇ ಕಂತು ಖಾತೆಗೆ ಜಮಾ!

ಬಾಗಲಕೋಟೆ : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬೊಮ್ಮಾಯಿ ಅಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ : ರೈತರ ಖಾತೆಗೆ ಹಣ ಜಮಾ
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 2022-2023 ನೇ ಸಾಲಿನ 2 ನೇ ಕಂತಿನ ಬಿಡುಗಡೆ ಆರ್ಥಿಕ ನೆರವಾದ 975 ಕೋಟಿ ರೂ. ಮೊತ್ತವನ್ನು 48,75,000 ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಚಾಲನೆ ನೀಡಲಿದ್ದಾರೆ.
ಸ್ತ್ರೀಯ ಸಾಮರ್ಥ್ಯ ಯೋಜನೆಯ 2 ನೇ ಕಂತಿನ ವಿಶೇಷ ಸಮುದಾಯ ಬಂಡವಾಳ ನಿಧಿಯನ್ನು ಎಸ್. ಹೆಚ್. ಜಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲಿದ್ದಾರೆ.
ಪುಣ್ಯಕೋಟಿ ಮತ್ತು ದತ್ತು ಯೋಜನೆಯಡಿ ಸಂಗ್ರಹಿಸಲಾದ ದೇಣಿಗೆಯನ್ನು ರಾಜ್ಯದಲ್ಲಿರುವ ಗೋಶಾಲೆಗಳಲ್ಲಿನ ಜಾನುವಾರಗಳ ಸಂರಕ್ಷಣೆಗೆ ಬಿಡುಗಡೆ ಮಾಡಲಿದ್ದಾರೆ.