ತುಮಕೂರಿನಲ್ಲಿ ಘೋರ ದುರಂತ : ಲಾರಿ ಟೈರ್ ಬ್ಲಾಸ್ಟ್ ಆಗಿ ಚಾಲಕ ಸ್ಥಳದಲ್ಲೇ ಸಾವು!

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಇಂಡಿಸ್ಕೆರೆ ಗ್ರಾಮದ ಬಳಿ ಲಾರಿ ಟೈರ್ ಬ್ಲಾಸ್ಟ್ ಆಗಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಹನುಮಂತರಾಯಪ್ಪ ಸಾವನ್ನಪ್ಪಿದ ಲಾರಿ ಚಾಲಕರಾಗಿದ್ದಾರೆ. ಲಾರಿ ಟೈರ್ ಬಿಸಿಯಾಗಿದೆಯೇ ಎಂದು ನೋಡಲು ಹೋದಾಗ ಏಕಾಏಕಿ ಬ್ಲಾಸ್ ಆಗಿದ್ದು, ಈ ವೇಳೆ ಟೈರ್ ಸ್ಟೋಟದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.