ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಸಿ.ನಾರಾಯಣ ಗೌಡ ಭೇಟಿ : ಕಾಮಗಾರಿ ವೀಕ್ಷಣೆ

ಶಿವಮೊಗ್ಗ : ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಮೊದಲಿಗೆ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿದರು.
ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಕಟ್ಟಡಕ್ಕೆ ಭೇಟಿ ನೀಡಿ ಪರಿವೀಕ್ಷಿಸಿದರು. ನಂತರ ರನ್ ವೇ ಯನ್ನು ವೀಕ್ಷಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್, ಕೆಎಸ್ಐಐಡಿಸಿ ತಾಂತ್ರಿಕ ಅಧಿಕಾರಿ ರಕ್ಷಿತ್ ಇತರೆ ಅಧಿಕಾರಿಗಳು ಇದ್ದರು.