ಹೊಸ ಪಿಂಚಣಿ ವ್ಯವಸ್ಥೆ ರದ್ದತಿ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ರೆಡಿ!

ಹೊಸ ಪಿಂಚಣಿ ವ್ಯವಸ್ಥೆ ರದ್ದತಿ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ರೆಡಿ!

ಬೆಂಗಳೂರು: ರಾಜ್ಯದಲ್ಲಿ ಎನ್​ಪಿಎಸ್​ ಸರ್ಕಾರಿ ನೌಕರರು ಎನ್​ಪಿಎಸ್​ ನ್ನು ರದ್ದು ಮಾಡಬೇಕು ಎಂದು ಹೋರಾಟ ನಡೆಸ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್​ ಷಡಾಕ್ಷರಿಯವರ ಹೇಳಿಕೆ ಸಾಕಷ್ಟು ವೈರಲ್​ ಆಗಿತ್ತು.

ಅಲ್ಲದೆ ಗೊಂದಲ ಮೂಡಿಸಿತ್ತು. ಸದ್ಯ ಈ ನಿಟ್ಟಿನಲ್ಲಿ ಸಂಘ ಹೋರಾಟಕ್ಕೆ ಸಿದ್ಧವಿದೆ ಎಂದು ರಾಜ್ಯಾಧ್ಯಕ್ಷ ಸಿಎಸ್​ ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಂಘ ಈ ನಿಟ್ಟಿನಲ್ಲಿ ನಿರ್ಣಾಯಕವಾದ ಹೋರಾಟ ನಡೆಸಲಿದೆ. ಮುಂದಿನ ಏಪ್ರಿಲ್​ ನಂತರ ಈ ಸಂಬಂಧ ಹೋರಾಟ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.