ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್​: ಹೊಸ ಬಾಂಬ್ ಸಿಡಿಸಿದ ಶಾಸಕ ಶ್ರೀನಿವಾಸಗೌಡ

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್​: ಹೊಸ ಬಾಂಬ್ ಸಿಡಿಸಿದ ಶಾಸಕ ಶ್ರೀನಿವಾಸಗೌಡ
ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್​ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಚುನಾವಣೆ ಕಾವು ಹೆಚ್ಚಾಗಿದೆ.

ಹಾಸನದಲ್ಲಿ ಟಿಕೆಟ್​ಗಾಗಿ ಜೆಡಿಎಸ್ ಫ್ಯಾಮಿಲಿ ವಾರ್ ಶುರುವಾಗಿದೆ. ಮತ್ತೊಂದೆಡೆ ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು ಏರ್​ ಶೋ ಉದ್ಘಾಟಿಸಿದ್ದಾರೆ. ಪ್ರಧಾನಿ ಭೇಟಿಯ ಲಾಭ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಇದರೊಂದಿಗೆ ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್​ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಮೂಲಕ ಮಹಿಳೆಯರ ಮತ ಸೆಳೆಯಲು ಮುಂದಾಗಿದ್ದಾರೆ. ರಾಜಕೀಯ ವಲಯದಲ್ಲಾಗುತ್ತಿರುವ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಪಡೆಯಿರಿ.