ಗಂಗೆಭಾವಿಯ ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯಿಂದ ಗೋ ಶಾಲೆ ಲೋಕಾರ್ಪಣೆ ಕಾರ್ಯಕ್ರಮ

ಗಂಗೆಭಾವಿಯ ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯ ವತಿಯಿಂದ ಗೋ ಶಾಲೆ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 29ರಂದು ಆಯೋಜಿಸಲಾಗಿದೆ. ಶಾಲೆಯ ಉದ್ಘಾಟನೆಯನ್ನು ಕೊಲ್ಲಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ನೇರವೇರಿಸಲಿದ್ದಾರೆ. ಸಾನಿಧ್ಯವನ್ನು ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಅಧ್ಯಕ್ಷತೆಯನ್ನು ಸೇವಾ ಸಂಸ್ಥೆಯ ಅಧ್ಯಕ್ಷರಾದ ಶಶಿಧರ ಚ. ಯಲಿಗಾರ ವಹಿಸಲಿದ್ದಾರೆ. ಈ ವೇಳೆ ಮಾದಾಪುರ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಸವಣೂರು ಕಲ್ಮಠದ ಚನ್ನಬಸವ ಮಹಾಸ್ವಾಮೀಜಿ, ಶಿಗ್ಗಾಂವಿನ ಸಂಗನಬಸವ ಮಹಾಸ್ವಾಮೀಜಿ, ಸವಣೂರಿನ ಕಲ್ಮಠದ ಶ್ರೀ ಮಹಾಂತ ಮಹಾಸ್ವಾಮಿಗಳು, ಹತ್ತಿಮತ್ತೂರಿನ ವಿರಕ್ತ ಮಠದ ಶ್ರೀ ನಿಜಗುಣ ಶಿವಯೋಗಿ ಮಹಾಸ್ವಾಮಿಗಳು, ಸುಕ್ಷೇತ್ರ ಮಂತ್ರವಾಡಿಯ ಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಣಕಟ್ಟಿಯ ಮುರಘೇಂದ್ರ ಮಠದ ವಿಶ್ವರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಹೂವಿನ ಶಿಗ್ಲಿಯ ವಿರಕ್ತ ಮಠದ ಚನ್ನವೀರ ಮಹಾಸ್ವಾಮಿಗಳು, ಸದಾಶಿವ ಪೇಟೆಯ ಗದಿಗೇಶ್ವರ ಮಹಾಸ್ವಾಮಿಗಳು ಉಪಸ್ಥಿತರಿರಲಿದ್ದಾರೆ. ಶ್ರೀ ಅಕ್ಷಯ ಜೋಶಿ ಹಾಗೂ ಅವರ ತಂಡದಿಂದ ಹಿಂದೂಸ್ತಾನಿ ಕೊಳಲು ವಾದಕ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ರೈತಧ್ವನಿ ಚಾನಲ್ ಸಂಪಾದಕ ಬಸವರಾಜ್ ಕುರಗೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.