ಆ.30ರಂದು ಬೆಂಗಳೂರಿನಲ್ಲಿ 'ಶ್ರೀಕೃಷ್ಣ ಜನ್ಮಾಷ್ಠಮಿ'ಯಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ - ಬಿಬಿಎಂಪಿ ಆದೇಶ

ಬೆಂಗಳೂರು : ಆಗಸ್ಟ್ 30, 2021ರಂದು 'ಶ್ರೀ ಕೃಷ್ಣ ಜನ್ಮಾಷ್ಠಮಿ' ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು ( ಪಶುಪಾಲನೆ ) ಆದೇಶ ಹೊರಡಿಸಿದ್ದು, ದಿನಾಂಕ: 30.08.2021ರ ಸೋಮವಾರದಂದು 'ಶ್ರೀಕೃಷ್ಣ ಜನ್ಮಾಷ್ಠಮಿ' ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.