ದಲಿತರ ಮೇಲಿನ ದೌರ್ಜನ್ಯ ಖಂಡಿಸಿ, ಪ್ರತಿಭಟನೆ

ಕೊಪ್ಪಳದ ಹನುಮಸಾಗರದ ಮಿಯಾಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಮಾರುತೇಶ್ವರ ದೇಗುಲ ಪ್ರವೇಶ ಮಾಡಿದ ಕಾರಣಕ್ಕೆ ದೇಗುವ ಅಪವಿತ್ರಗೊಂಡಿದೆ ಎಂದು ಹೆತ್ತವರಿಗೆ 25 ಸಾವಿರ ದಂಡ ವಿಧಿಸಿರುವುದು ಸೇರಿದಂತೆ ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಹಾಗೂ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೊಪ್ಪಳ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ದಲಿತ ಮುಖಂಡ ಗುರುನಾಥ ಉಳ್ಳಿಕಾಶಿ ಮಾತನಾಡಿ, ಕೂಡಲೇ ಸರ್ಕಾರ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಸಾರ್ವಜನಿಕ ಸ್ಥಳಗಳಲ್ಲಿ ದಲಿತರಿಗೆ ಮುಕ್ತವಾಗಿ ಓಡಾಡುವ ವಾತಾವರಣ ಕಲ್ಪಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರುಗಳಾದ ಫಕ್ಕಣ್ಣ ದೊಡ್ಡಮನಿ, ಪ.ಶಿ.ದೊಡ್ಡಮನಿ, ದೇವಣ್ಣ ಇಟಗಿ, ಇಮ್ತಿಯಾಜ್ ಬಿಜಾಪುರ, ಸುನಿಲ ನಿಟ್ಟೂರ, ರೇವಣಸಿದ್ದಪ್ಪ ದೇಸಾಯಿ, ಗುರುಮೂರ್ತಿ ಬೆಂಗಳೂರು, ಈರಣ್ಣ ಮನಗೂಳಿ ಸೇರಿದಂತೆ ಮುಂತಾದವರು ಇದ್ದರು.