ಚಾಮರಾಜನಗರದಲ್ಲಿ ಘೊರ ದುರಂತ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಆತ್ಮಹತ್ಯೆ

ಚಾಮರಾಜನಗರದಲ್ಲಿ ಘೊರ ದುರಂತ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಘೊರ ದುರಂತ ನಡೆದಿದೆ. ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅನೈತಿಕ ಸಂಬಂಧ ಹೊಂದಿದ್ದಳು.

ಆಕೆ ಪತಿಯನ್ನು ಬಿಟ್ಟು ಬಂದು ಪರಪುರುಷನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು.
ಲಕ್ಷ್ಮಿ ಹತ್ಯೆಯಾದ ಪತ್ನಿ. ಅನೈತಿಕ ಸಂಬಂಧ ಹಿನ್ನೆಲೆ ಪತಿ ಮುನಿರಾಜ್‌ ಪತ್ನಿ‌ಯನ್ನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಆಕೆಯ ರಕ್ತಸಿಕ್ತ ದೇಹದ ವಿಡಿಯೋ ಮಾಡಿ ತನ್ನ ವಾಟ್ಸಪ್ ಸ್ಟೇಟಸ್‌ಗೆ ಹಾಕಿಕೊಂಡು ತಾನೂ ಆತಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.