ಜನರ ನಿಂದಿಸಲು ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತಿದೆಯೇ?: ಬಿಜೆಪಿ

ಕಾನೂನು ಪ್ರಕಾರವೇ ಇದರ ವಿರುದ್ಧ ಹೋರಾಡುತ್ತೇವೆಂದು ಹೇಳಿದ್ದರು.
ನ್ಯಾಯಾಂಗವನ್ನೂ ತನ್ನ ಜೇಬಿನಲ್ಲಿ ಇಟ್ಟುಕೊಳ್ಳಬೇಕೆ? ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಸ್ಪೀಕರ್ ಓಂ ಬಿರ್ಲಾ ಅವರೇ ಈ ಬಗ್ಗೆ ನಿರ್ಧರಿಸಬೇಕು ಎಂದರು. ಗಾಂಧಿಯವರು ತಮ್ಮ ಹೇಳಿಕೆಗಳ ಮೂಲಕ ಮೋದಿ ಉಪನಾಮವನ್ನು ಹೊಂದಿರುವ ಜನರನ್ನು ಅವಮಾನಿಸಿದ್ದಾರೆ, ಇದು ಮಾನನಷ್ಟವಾಗಿದೆ.
ತೀರ್ಪು ನೀಡುವ ಮೊದಲು ಅವರ ವಕೀಲರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು, ರಾಹುಲ್ ವಿರುದ್ಧ ಇದೇ ರೀತಿಯ ಮತ್ತೊಂದು ಪ್ರಕರಣ ಪಾಟ್ನಾದ ನ್ಯಾಯಾಲಯದ ಅಂಗಳದಲ್ಲಿದೆ. ಜಾತಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು ಜನರನ್ನು ಅವಮಾನಿಸಿದ್ದಾರೆ. ನ್ಯಾಯಾಲಯದ ತೀರ್ಪು ಬಳಿಕ ಸತ್ಯ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿದ್ದೇನೆಂದು ಹೇಳಿದ್ದಾರೆ. ಇದರರ್ಥ ಉಪನಾಮ ಬಳಿಕ ಜನರುನ್ನು ಅವಮಾನಿಸುವುದಾ ಎಂದು ಪ್ರಶ್ನಿಸಿದ್ದಾರೆ.
"ರಾಹುಲ್ ಗಾಂಧಿ ಜನರನ್ನು ನಿಂದಿಸುವ ಸಲುವಾಗಿ ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯವನ್ನು ಬಯಸುತ್ತದೆಯೇ? ದೇಶದಲ್ಲಿ ಕಾನೂನಿನ ಆಡಳಿತವಿದ್ದು, ಅದು ಚಾಲ್ತಿಯಲ್ಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆಗಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡುವ ಇತಿಹಾಸವನ್ನು ಹೊಂದಿದ್ದಾರೆಂದು ಕಿಡಿಕಾರಿದರು."ಭಾರತದ ಕಾನೂನಿನ ಪ್ರಕಾರ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯು ಅಶ್ಲೀಲ ಹೇಳಿಕೆಗಳು, ನಿಂದನೆಗಳು ಅಥವಾ ಯಾವುದೇ ಮಾನಹಾನಿಕರ ಟೀಕೆಗಳಿಂದ ಮಾನಹಾನಿಗೊಳಗಾದರೆ ಪರಿಹಾರವನ್ನು ಪಡೆದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷವು ಇದಕ್ಕೆ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದ್ದಾರೆ.