ತಾಂತ್ರಿಕ ದೋಷ: ಮಸ್ಕತ್‌ಗೆ ಹೊರಟಿದ್ದ ʻಏರ್ ಇಂಡಿಯಾʼ ವಿಮಾನ ತಿರುವನಂತಪುರಂಗೆ ವಾಪಸ್

ತಾಂತ್ರಿಕ ದೋಷ: ಮಸ್ಕತ್‌ಗೆ ಹೊರಟಿದ್ದ ʻಏರ್ ಇಂಡಿಯಾʼ ವಿಮಾನ ತಿರುವನಂತಪುರಂಗೆ ವಾಪಸ್

ತಿರುವನಂತಪುರಂ: ತಿರುವನಂತಪುರಂನಿಂದ ಒಮಾನ್‌ನ ಮಸ್ಕತ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಅದರ ಆನ್‌ಬೋರ್ಡ್ ಕಂಪ್ಯೂಟರ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷದಿಂದ ಹಿಂತಿರುಗಿದೆ.

ಐಎಕ್ಸ್ 549 ವಿಮಾನವು ಕೇರಳ ರಾಜ್ಯದ ರಾಜಧಾನಿ‌ ತಿರುವನಂತಪುರಂನಿಂದ ಬೆಳಿಗ್ಗೆ 8.30 ಕ್ಕೆ ಟೇಕ್ ಆಫ್ ಆಗಿದ್ದು, ಪೈಲಟ್‌ಗಳಲ್ಲಿ ಒಬ್ಬರು ತಾಂತ್ರಿಕ ದೋಷವನ್ನು ಗಮನಿಸಿದ ನಂತರ 9.17 ಕ್ಕೆ ವಾಪಸ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.

'ಎಲ್ಲಾ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ' ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಇಲ್ಲಿಂದ ಟೇಕ್ ಆಫ್ ಆಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.