ದೇಶದ ವಿವಿಧೆಡೆ ದಾಳಿ ನಡೆಸಿದ ಎನ್ಐಎ

ದೆಹಲಿ, ಹರಿಯಾಣ & ಇತರ ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ವಾರ ಲಾರೆನ್ಸ್ ಬಿಷ್ಣೋಯ್, ನವೀನ್ ದಬಸ್ & ಸುನಿಲ್ ಬಲಿಯಾನ್ ಅಲಿಯಾಸ್ ಟಿಲ್ಲು ತಾಜ್ಪುರಿಯಾ ಎಂಬ ದರೋಡೆಕೋರರನ್ನು ಕಸ್ಟಡಿಗೆ ತೆಗೆದುಕೊಂಡಿದ್ದ NIA, ಪಂಜಾಬ್ & ರಾಜಸ್ತಾನದಾದ್ಯಂತ ದಾಳಿ ನಡೆಸಿದೆ. ಭಯೋತ್ಪಾದಕ ಜಾಲ & ಅವುಗಳಿಗೆ ಧನಸಹಾಯ, ಮೂಲಸೌಕರ್ಯಗಳನ್ನು ಒದಗಿಸುತ್ತಿರುವವರನ್ನು ಪತ್ತೆ ಮಾಡಲು ದಾಳಿ ನಡೆಯುತ್ತಿದೆ ಎಂದಿದ್ದಾರೆ.