ಧರಣಿ ನಿರತ 'ಅಂಗನವಾಡಿ ಕಾರ್ಯಕರ್ತೆ'ಯರ ಜತೆ ಸಚಿವ ಅಶ್ವತ್ಥನಾರಾಯಣ ಸಭೆ ; ಬೇಡಿಕೆ ಈಡೇರಿಕೆ ಭರವಸೆ

ಧರಣಿ ನಿರತ 'ಅಂಗನವಾಡಿ ಕಾರ್ಯಕರ್ತೆ'ಯರ ಜತೆ ಸಚಿವ ಅಶ್ವತ್ಥನಾರಾಯಣ ಸಭೆ ; ಬೇಡಿಕೆ ಈಡೇರಿಕೆ ಭರವಸೆ

ಬೆಂಗಳೂರು : ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನ ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ.

ಅದ್ರಂತೆ, ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನ ಆಲಿಸಿದರು.

ನಂತ್ರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನ ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನ ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ತಿಳಿಸಿದರು.