ನಾಳೆ ಹುಟ್ಟುಹಬ್ಬ ಆಚರಿಸಬೇಕಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು

ಸಾಗರ: ತಾಲೂಕಿನ ವರದಹಳ್ಳಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅರುಣ್ (24) ಮೃತಪಟ್ಟಿದ್ದು, ಆತನ ಸ್ನೇಹಿತ ಅಜೇಯ ಕಾಲು ಮುರಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಫೆ.10ರಂದು ಜನ್ಮದಿನ ಆಚರಿಸಬೇಕಾಗಿದ್ದ ಅರುಣ್ ಕರ್ಕಿಕೊಪ್ಪದ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.