ಸುಪ್ರೀಂ ಕೋರ್ಟ್ಗೆ ಐವರು ನೂತನ ನ್ಯಾಯಾಧೀಶರ ನೇಮಕ; ಪ್ರಮಾಣ ವಚನ ಬೋಧಿಸಿದ ಡಿವೈ ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್ ಸೋಮವಾರ ಐವರು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ವಾರಾಂತ್ಯದಲ್ಲಿ ಇವರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು.
ಅದರಂತೇ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13 ರಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.