ಫೆ. 6 ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ: ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ

ಫೆ. 6 ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ: ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ

ತುಮಕೂರು: ವಿಧಾನಸಭೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾಯಕರು ನಾನಾ ಕಸರತ್ತು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ.

ಇದೇ ತಿಂಗಳು 6 ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಹೆಚ್​ಎಎಲ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಫೆಬ್ರವರಿ 6 ರಂದು ಬಾರಿ ಸರಕು ವಾಹನಗಳು, ಕೆಎಸ್​ಆರ್​ಟಿಸಿ ಬಸ್​ಗಳ ಮಾರ್ಗದಲ್ಲಿ ಬದಲಾವಣೆ ತುಮಕೂರು ಡಿಸಿ ವೈಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್ ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸಬೇಕು ಎಂದು ಡಿಸಿ ವೈಎಸ್ ಪಾಟೀಲ್ ಆದೇಶಿಸಿದ್ದಾರೆ.ಹೆಚ್​ಎಎಲ್ ಮುಂಭಾಗ ಬಾರಿ ವಾಹನಗಳ‌ ನಿರ್ಭಂದಿಸಿ ಜಿಲ್ಲಾಡಳಿತ ಬದಲಿ ಮಾರ್ಗ ವ್ಯವಸ್ಥೆ ಕಲ್ಪಿಸಿದೆ.ಮೋದಿ ಅವರು ಹೆಚ್​ಎಎಲ್ ಉದ್ವಾಟನೆಗೆ ಆಗಮಿಸಲಿದ್ದು ಈಗಾಗಲೇ ಸಕಲ ತಯಾರಿ ನಡೆಸಲಾಗಿದೆ‌. ಫೆಬ್ರವರಿ 6 ರಂದು ಮಧ್ಯಾಹ್ನ 3.30 ಸುಮಾರಿಗೆ ಮೋದಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯಿರುವ ನೂತನ ಹೆಚ್ ಎಎಲ್ ಘಟಕಕ್ಕೆ ಆಗಮಿಸಿ ಹಲವು ಕಾರ್ಯಕ್ರಮಗಳ ಉದ್ವಾಟನೆ ನೇರವೇರಿಸಲಿದ್ದಾರೆ.