ಬೆಂಗಳೂರಿನಲ್ಲಿ ಕೆಲಸ ಕೊಡಿಸುತ್ತೇವೆ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಕೊಡಿಗೆಹಳ್ಳಿ ಪೊಲೀಸರ ಭರ್ಜರಿ ಬೇಟೆಯಾಡಿದ್ದಾರೆ. ಕೆಲಸ ಕೊಡಿಸುತ್ತೇವೆ ಎಂದು ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್ನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಮಲ್ಲು ಶಿವಶಂಕರ ರೆಡ್ಡಿ, ಗುಂಜ ಮಂಗರಾವ್, ಶೇಕ್ ಶಹಬಾಜಿ, ಮಹೇಶ್ ಬಂಧಿತರು.
ಪ್ರದೀಪ್ ಅಸಾಮ್ವರ್ ಜನವರಿ 11 ರಂದು ಬೆಳಗ್ಗೆ 5.30 ಕ್ಕೆ ಹೆಬ್ಬಾಳ ಬಳಿ ಬಂದು ಇಳಿದಿದ್ದನು. ಹೆಬ್ಬಾಳನಲ್ಲಿ ಪ್ರದೀಪ್ ಅಸಾಮ್ವರ್ನನ್ನು ಸ್ವಿಫ್ಟ್ ಕಾರಿನಲ್ಲಿ ಬಂದು ನಾಲ್ವರು ಪಿಕ್ ಮಾಡಿಕೊಂಡಿದ್ದಾರೆ. ಹೀಗೆ ಕಾರಿನಲ್ಲಿ ಹೋಗುವಾಗ ಪ್ರದೀಪ್, ಶಿವಶಂಕರ್ ರೆಡ್ಡಿ ಜೊತೆಗೆ ಬಂದಿದ್ದವರ ಹೆಸರು ಕೇಳಿದ್ದಾನೆ. ಆಗ ಆರೋಪಿ ಶಿವಶಂಕರ್ ರೆಡ್ಡಿ ಹೆಸರು ಹೇಳದಿದ್ದಾಗ ಆತನಿಗೆ ಅನುಮಾನ ಬಂದಿದೆ.