ಬೆಳ್ತಂಗಡಿ| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಬೆಳ್ತಂಗಡಿ| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಸುಧೀರ್

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ‌ಪೊಲೀಸರು‌ ಬಂಧಿಸಿರುವುದಾಗಿ ವರದಿಯಾಗಿದೆ.

ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ.

ಆರೋಪಿ ಸುಧೀರ್ ಬಂಧನಕ್ಕೆ‌ ಒತ್ತಾಯಿಸಿ ಇತ್ತೀಚೆಗೆ ಬಿಲ್ಲವ ಸಂಘಟನೆಗಳಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು.

ಈ ಪ್ರಕರಣದಲ್ಲಿ ಶಾಮೀಲಾಗಿರುವ ಕಡಿರುದ್ಯಾವರ ಕೊಪ್ಪದ ಗಂಡಿಯ ಮನೋಹರ ಹಾಗೂ ಮಂಗಳೂರು ಕೊಣಾಜೆಯ ಮಾಧವ ಯಾನೆ ಮಾಧು ಎಂಬ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಸುಧೀರನನ್ನು ಜ.17 ರಂದು ಬಂಧಿಸಲಾಗಿದೆ.