ಮಂಡ್ಯದಲ್ಲಿ ಕೀಟನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ಮಂಡ್ಯದಲ್ಲಿ ಕೀಟನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ಮಂಡ್ಯ: ಕೀಟನಾಶಕ ಮಿಶ್ರಿತ ನೀರು ಸೇವಿಸಿದಂತ ಮಕ್ಕಳು ಸೇರಿದಂತೆ 15ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ, ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30ಕ್ಕೂ ಹೆಚ್ಚು ಜನರು ತೆರಳಿದ್ದರು. ಹೀಗೆ ಕಬ್ಬು ಕಟಾವಿಗೆ ಬಂದಿದ್ದಂತ ಜನರಿಗೆ ಮಧ್ಯಾಹ್ನದ ಊಟದ ನಂತ್ರ, ಕುಡಿಯೋದಕ್ಕೆ ನೀರಿಗಾಗಿ ಜಮೀನಿನಿನ ಡ್ರಮ್ ನಲ್ಲಿ ಸಗ್ರಹಿಸಿದ್ದನ್ನು ಕುಡಿದಿದ್ದಾರೆ. ಹೀಗಾಗಿ ಕ್ರಿಮಿನಾಶಕ ಸಿಂಪಡಿಸಲು ಇಟ್ಟಿದ್ದ ಡ್ರಮ್ ನಲ್ಲಿನ ನೀರು ಕುಡಿದ ಪರಿಣಾಣ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.