ರಾಜ್ಯ ಸರ್ಕಾರ ಮತ್ತೆ ಗೋಲ್ಮಾಲ್ ನಲ್ಲಿ ತೊಡಗಿದೆ : ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಗೋಲ್ಮಾಲ್ ನಲ್ಲಿ ತೊಡಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ತರಾತುರಿ ಟೆಂಡರ್ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ತರಾತುರಿ ಟೆಂಡರ್ ನೀಡಲಾಗುತ್ತಿದೆ.
ರಾಜ್ಯದಲ್ಲಿ ಮುಂದಿನ 45 ದಿನಗಳ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಎಲ್ಲಾ ಟೆಂಡರ್ ಗಳನ್ನು ರದ್ದು ಪಡಿಸಿ ತನಿಖೆಗೆ ನೀಡುತ್ತೇವೆ. ವಿಧಾನಸಭೆ ಚುನಾವಣೆಗೆ ದುಡ್ಡು ಮಾಡಲು ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.