ರಾಹುಲ್ ಗಾಂಧಿ ವಿರುದ್ಧ ಕ್ರಮ ಅಗತ್ಯ: ಏಕನಾಥ ಶಿಂಧೆ

ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಒತ್ತಾಯಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಸೀಮಿತರಲ್ಲ.
ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ ರಾಹುಲ್ ಕೇವಲ ಒಬ್ಬ ವ್ಯಕ್ತಿಯನ್ನು ಅವಮಾನಿಸಿಲ್ಲ, ಬದಲಾಗಿ ಒಬಿಸಿ ಸಮುದಾಯವನ್ನೇ ಅವಮಾನಿಸಿದ್ದಾರೆ. ಇದೇ ರೀತಿ ಮಾತನಾಡುವುದನ್ನು ಅವರು ಮುಂದುವರಿಸಿದರೆ ರಸ್ತೆಯಲ್ಲಿ ನಡೆದಾಡಲೂ ಅವರಿಗೆ ಕಷ್ಟವಾಗಬಹುದು,’ ಎಂದು ಎಚ್ಚರಿಸಿದರು.
ಮತ್ತೊಂದು ಕೇಸು?
ಮತ್ತೂಂದೆಡೆ, ವೀರ ಸಾವರ್ಕರ್ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಚಿಂತನೆಯಲ್ಲಿ ಶಿವಸೇನೆಯ ಏಕನಾಥ ಶಿಂಧೆ ಬಣ ಚಿಂತನೆ ನಡೆಸಿದೆ.