ರೈತರಿಗೆ ತೆರಿಗೆರಹಿತ ಡೀಸೆಲ್ ಸರಬರಾಜು ಪ್ರಮಾಣ ಹೆಚ್ಚಳ

ಕರ್ನಾಟಕ ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆಯನ್ನು ಫೆಬ್ರವರಿ 17ರಂದು ಆರಂಭಿಸಿದ್ದಾರೆ. ಈ ಬಜೆಟ್ ಮಂಡನೆ ವೇಳೆ ರೈತರಿಗೆ ಬಂಪರ್ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.
ರೈತರಿಗೆ ತೆರಿಗೆರಹಿತ ಅಂದರೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಇನ್ನು ಎಲ್ಲ ಯಾಂತ್ರೀಕೃತ ಬೋಟ್ಗಳಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿದ ಜಿಯೋ-ಪೊಸಿಷನಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಕರಾವಳಿಯ ಉಡುಜಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸೀಫುಡ್ ಪಾರ್ಕ್ ಆರಂಭ ಮಾಡಲಾಗುವುದು ಎಂದು ಕೂಡಾ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬಜೆಟ್ ಆರಂಭದಲ್ಲಿಯೇ ರೈತರಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಲಾಗಿದೆ. ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡುವ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡುವ ಘೋಷಣೆ ಮಾಡಲಾಗಿದೆ. ಸಾಲ ಮಿತಿಯನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತನೆ ಮಾಡಲು 40 ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿ ಈ ಪರಿವರ್ತನೆ ಆಗುವವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡುವ ನಿರ್ಧಾರವನ್ನು ಕೂಡಾ ಮಾಡಲಾಗಿದೆ.
ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಿಸಲಾಗಿದೆ. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭದ ಘೋಷಣೆ ಮಾಡಲಾಗಿದೆ.