ಲೂಟಿ ಹೊಡೆಯೋದು ಬಿಟ್ರೆ ಬಿಜೆಪಿಗರಿಗೆ ಬೇರೆ ಕೆಲಸ ಇಲ್ಲ: ಸಿದ್ದರಾಮಯ್ಯ

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ವಲಯದಲ್ಲಿ ಆರೋಪ- ಪ್ರತ್ಯಾರೋಪ ಶುರುವಾಗಿದೆ. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿಂದು ಪ್ರಜಾಧ್ವನಿ ಸಮಾವೇಶ ಹಿನ್ನೆಲೆ ಸಿದ್ದರಾಮಯ್ಯಗೆ ತೆರಳಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಪಾಪದ ಪುರಾಣ ಅವರ ಕರ್ಮದ ಕಾಂಡವನ್ನ ಜನರ ಮುಂದೆ ಇಟ್ಟಿದ್ದೇವೆ.
ನಗರದಲ್ಲಿ ಮಾತನಾಡಿದ ಅವರು, ಲೂಟಿ ಹೊಡೆಯೋದು ಬಿಟ್ರೆ ಬಿಜೆಪಿಗರಿಗೆ ಬೇರೆ ಕೆಲಸ ಇಲ್ಲ. ವಿಧಾನಸೌಧದ ಗೋಡೆಗೆ ಕಿವಿ ಕೊಟ್ಟರೆ ಬರೀ ಲಂಚ ಲಂಚ ಅಂತಾ ಕೇಳಿಸುತ್ತಿದೆ. ಬಿಜೆಪಿಗರ ಕಮೀಷನ್ ದಂಧೆಗೆ ಅನೇಕರು ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.