ವಿವಾದಾತ್ಮಕ ಹೇಳಿಕೆ : ಸ್ಯಾಂಡಲ್ ವುಡ್ ನಟಿ 'ರಚಿತಾ ರಾಮ್' ವಿರುದ್ಧ ದೂರು ದಾಖಲು

ಬೆಂಗಳೂರು : ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ 'ರಚಿತಾ ರಾಮ್' ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.
ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಈ ಬಗ್ಗೆ ಮಾತನಾಡಿದ್ದು, ಭಾರತದ ಸಂವಿಧಾನಕ್ಕೆ ನಟಿ ರಚಿತಾ ರಾಮ್ ಅವರು ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇ ಬೇಕು, ಅವರನ್ನು ಈ ದೇಶದಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆ ರಚಿತಾ ರಾಮ್ ವಿರುದ್ಧ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಶಿವಲಿಂಗಯ್ಯ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಜನವರಿ 26ರಂದು ತೆರೆಕಾಣುತ್ತಿದೆ. . ಗಣರಾಜ್ಯೋತ್ಸವದಂದು ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆಯಿದೆ. ಇನ್ನೂ, ಈ ಸಿನಿಮಾ ರಿಲೀಸ್ ಗೂ ಮುನ್ನವೇ ಹಲವು ರೀತಿಯಲ್ಲಿ ಸುದ್ದಿಯಾಗಿತ್ತು. ಇದೀಗ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ 'ರಚಿತಾ ರಾಮ್' ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.