ಸಿದ್ದರಾಮೋತ್ಸವಕ್ಕೆ' ಟಕ್ಕರ್ ಕೊಡಲು ಬಿಜೆಪಿ ಪ್ಲಾನ್ : ದಾವಣಗೆರೆಯಲ್ಲಿ `ಮಹಾ ಸಂಗಮ'ಕ್ಕೆ ಸಿದ್ಧತೆ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿರುವ ಬಿಜೆಪಿ ಇದೀಗ ದಾವಣಗೆರೆಯಲ್ಲಿ ಸಿದ್ದರಾಮೋತ್ಸವಕ್ಕೆ ಟಕ್ಕರ್ ಕೊಡಲು ಸಿದ್ಧತೆ ನಡೆಸಿದೆ.
ಹೌದು, ಫೆಬ್ರವರಿ ತಿಂಗಳ ಅಂತ್ಯದಿಂದ ರಾಜ್ಯದ ನಾಲ್ಕು ಭಾಗಗಳಿಂದ ರಥಯಾತ್ರೆ ಮಾದರಿಯ ವಿಜಯ ಸಂಕಲ್ಪ ಯಾತ್ರೆ ಆರಂಭಿಸಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಜಯಸಂಕಲ್ಪ ಯಾತ್ರೆ ಸಲುವಾಗಿ ವಿವಿಧ ನಾಯಕರನ್ನು ಒಳಗೊಂಡ 4 ತಂಡಗಳನ್ನು ರಚಿಸಲಾಗುತ್ತದೆ. ಈ ನಾಲ್ಕು ತಂಡಗಳು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆ ಮೈಸೂರು ಪ್ರದೇಶದಲ್ಲಿ ಎರಡು ಭಾಗಗಳಾಗಿ ಪ್ರವಾಸ ಕೈಗೊಳ್ಳಲಾಗುವುದು. ಬಳಿಕ ದಾವಣಗೆರೆಯಲ್ಲಿ ಮಹಾಸಂಗಮ ನಡೆಯಲಿದೆ ಎಂದು ಹೇಳಿದ್ದಾರೆ.