ಹಿಂದೂ-ಮುಸ್ಲಿಂ ಮತ್ತು ಬಿಜೆಪಿ ಬಗ್ಗೆ ಹೀಗೆ ಹೇಳೋದಾ ರಾಹುಲ್ ಗಾಂಧಿ?

ನವದೆಹಲಿ, : ಭಾರತದಲ್ಲಿ ನೈಜ ಸಮಸ್ಯೆಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವುದಕ್ಕೆ ಬಿಜೆಪಿಯು ಪ್ರಯತ್ನಿಸುತ್ತಿದೆ. ಅದೇ ನಿಟ್ಟಿನಲ್ಲಿ ಹಿಂದೂ-ಮುಸ್ಲಿಂ ವಿಷಯವನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂಷಿಸಿದ್ದಾರೆ.ಕೆಂಪು ಕೋಟೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಬಿಜೆಪಿಯು ದ್ವೇಷವನ್ನು ಹರಡುತ್ತಿದೆ ಎಂದು ಕಾಂಗ್ರೆಸ್ ಸಂಸದ ವಾಗ್ದಾಳಿ ನಡೆಸಿದರು.